rain alert again : ಬೇಸಿಗೆಯಿಂದ ತತ್ತರಿಸಿದ ಜನತೆಗೆ ಮತ್ತೆ ಮಳೆರಾಯ ತಂಪೆರೆಯಲಿದ್ದಾನೆ. ಹೌದು, ಇದೇ ಮಾರ್ಚ್ 22 ರಿಂದ 25 ರವರೆಗೆ ನಾಲ್ಕು ದಿನಗಳ ಕಾಲ ರಾಜ್ಯದ ಅರ್ಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಾರ್ಚ್ 22 ರಿಂದ 23 ರವರೆಗೆ ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ರಾಯಚೂರು, ಬೀದರ್, ಯಾದಗಿರಿ, ಕಲಬುರಗಿ ಮಂಡ್ಯ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.
ಮಾರ್ಚ್ 23 ರಂದು ಉಡುಪಿ, ರಾಮನಗರ, ಕೊಪ್ಪಳ, ಗದಗ ಜಿಲ್ಲೆಗಳ ಪ್ರತ್ಯೇಕ ಸ್ಥಳದಲ್ಲಿ ಲಘು ಮಳೆಯಾಗಲಿದೆ. ಇದೇ ಮಾರ್ಚ್ 24 ಮತ್ತು 25 ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಹಾವೇರಿ, ಧಾರವಾಡ, ಗದಗ, ಮೈಸೂರು, ಹಾಸನ, ಚಿಕ್ಕಮಗಳೂರು, ಕೊಡಗು, ಮಂಡ್ಯ, ಚಾಮರಾಜಗರ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ಇದನ್ನೂ ಓದಿ : ಶಾಖಾ ನಿರೋಧಕ ವಾಹನ ಖರೀದಿಗೆ ಸಬ್ಸಿಡಿ ನೀಡಲು ಅರ್ಜಿ ಆಹ್ವಾನ
ಗುರುವಾರ ಮತ್ತು ಶುಕ್ರವಾರ 30-40 ಕಿ.ಮೀ ವೇಗದಲ್ಲಿ ಗಾಳಿಯು ಕರ್ನಾಟಕದ ಒಳನಾಡಿನ ಪ್ರತ್ಯೇಕ ಸ್ಥಳಗಳಲ್ಲಿ ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ರಾಜ್ಯದ ಉಳಿದ ಕಡೆಗಳಲ್ಲಿ ಒಣ ಹವೆ ಮುಂದುವರೆಯಲಿದೆ.
rain alert again ಯಾವ ಯಾವ ಊರಿನಲ್ಲಿ ಮಳೆಯಾಗುತ್ತದೆ? ಈ ನಂಬರಿಗೆ ಕರೆ ಮಾಡಿ
ಇಂದು ಯಾವ ಯಾವ ಊರಿನಲ್ಲಿ ಮಳೆಯಾಗುತ್ತದೆ ಎಂಬುದನ್ನು ತಿಳಿದುಕೊಳ್ಳಲು ವರುಣಮಿತ್ರ ಸಹಾಯವಾಣಿ ನಂಬರಿಗೆ ಕರೆ ಮಾಡಬೇಕು. ಹೌದು, ವರುಣಮಿತ್ರ ಸಹಾಯವಾಣಿ ನಂಬರ್ 92433 45433 ಗೆ ಕರೆ ಮಾಡಿದರೆ ಸಾಕು, ನಿಮಗೆ ಮಳೆಯ ಮಾಹಿತಿ ಸಿಗುತ್ತದೆ. ಈ ನಂಬರ್ ದಿನದ 24 ಗಂಟೆಗಳ ಕಾಲ ಕಾರ್ಯನಿರ್ವಹಿಸುತ್ತದೆ. ನೀವು ಇದ್ದ ಊರಿನಲ್ಲಿಯೂ ಮುಂದಿನ ಐದು ದಿನದ ಹವಾಮಾನದ ವರದಿಯನ್ನು ನೀಡಲಾಗುವುದು. ಇದಕ್ಕಾಗಿ ರೈತರು ಯಾವುದೇ ಶುಲ್ಕ ಪಾವತಿಸುವ ಅಗತ್ಯವಿಲ್ಲ. ಸಂಪೂರ್ಣ ಉಚಿತವಾಗಿರುತ್ತದೆ.
ಇನ್ನೇಕೆ ತಡ ವರುಣಮಿತ್ರ ಸಹಾಯವಾಣಿ ನಂಬರ್ 92433 45433 ಗೆ ಕರೆ ಮಾಡಿ ನಿಮ್ಮೂರಿನ ಸುತ್ತಮುತ್ತ ಮಳೆಯಾಗುತ್ತೋ ಇಲ್ಲವೋ ಎಂಬ ಮಾಹಿತಿ ಪಡೆಯಿರಿ. ಇದಕ್ಕಾಗಿ ನೀವು ಶುಲ್ಕ ಪಾವತಿಸುವ ಅಗತ್ಯವಿಲ್ಲ. ಮನೆಯಲ್ಲಿಯೇ ಕುಳಿತು ಮಾಹಿತಿ ಪಡೆಯಬಹುದು.
again ಮೇಘದೂತ್ ಆ್ಯಪ್ ಡೌನ್ಲೋಡ್ ಮಾಡಿ ಐದು ದಿನ ಮೊದಲೇ ಮಳೆಯ ಮಾಹಿತಿ ಪಡೆಯುವುದು ಹೇಗೆ?
ರೈತರು ಮನೆಯಲ್ಲಿಯೇ ಕುಳಿತು ಐದು ದಿನ ಮೊದಲೇ ಮಳೆಯಾಗುತ್ತೋ ಇಲ್ಲವೋ ಎಂಬುದನ್ನು ತಿಳಿದುಕೊಳ್ಳಬಹುದು. ಹೌದು, ಈ
https://play.google.com/store/apps/details?id=com.aas.meghdoot&hl=en_IN&gl=US
ಲಿಂಕ್ ಮೇಲ ಕ್ಲಿಕ್ ಮಾಡಿ ಮೇಘದೂತ್ ಆ್ಯಪ್ ಇನಸ್ಟಾಲ್ ಮಾಡಿಕೊಳ್ಳಬಹುದು. ನಂತರ ಇನಸ್ಟಾಲ್ ಮೇಲೆ ಕ್ಲಿಕ್ ಮಾಡಿ ಓಪನ್ ಮೇಲೆ ಕ್ಲಿಕ್ ಮಾಡಬೇಕು. ನೀವು ಯಾವ ಭಾಷೆಯಲ್ಲಿ ಮಾಹಿತಿ ಚೆಕ್ ಮಾಡಬೇಕೆಂದುಕೊಂಡಿದ್ದೀರೋ ಆ ಭಾಷೆ ಆಯ್ಕೆ ಮಾಡಿಕೊಳ್ಳಬೇಕು, ನಂತರ ಮುಂದೆ ಮೇಲೆ ಕ್ಲಿಕ್ ಮೇಘದೂತ್ ಆ್ಯಪ್ ಲಾಗಿನ್ ಆಗಬೇಕು. ನಿಮ್ಮ ಮೊಬೈಲ್ ನಂಬರ್ ನಮೂದಿಸಿ ಲಾಗಿನ್ ಆಗಬೇಕು. ನಂತರ ವೈಲ್ ಯೂಸಿಂಗ್ ದ ಆ್ಯಪ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಜಿಲ್ಲೆಯ ಕನಿಷ್ಠ, ಗರಿಷ್ಠ ತಾಪಮಾನ, ಗಾಳಿಯ ವೇಗ ಹಾಗೂ ಗಾಳಿಯ ದಿಕ್ಕು ತೇವಾಂಶದ ಮಾಹಿತಿ ಕಾಣಿಸುತ್ತದೆ.